ಬೆಂಗಳೂರು: ಅತೃಪ್ತ ಶಾಸಕರು ಬಂದಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ. ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದೇ ಸಂವಿಧಾನ ಬಾಹಿರವಾಗಿದೆ. ಬಿಜೆಪಿಯವರು ಹಣದ ಆಮಿಷ ಒಡ್ಡಿ ಕುದುರೆ ವ್ಯಾಪಾರ ನಡೆಸಿದ್ದು, ಇದು ಬಿಜೆಪಿ ಗೆಲವು ಅಲ್ಲ. ಕುದುರೆ ವ್ಯಾಪಾರಕ್ಕೆ ಸಿಕ್ಕ ಜಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ