ಬೆಳಗಾವಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಕುಸಿತಕ್ಕೂ ಜಾರಕಿಹೋಳಿ ಕುಟುಂಬಕ್ಕೂ ಸಂಬಂಧವಿಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೋಳಿ ಸೋದರ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಒಳಗಿನ ಬೇಗುದಿ ಬಗೆಗೆ ನಮಗೆ ತಿಳಿದಿದೆ.ಮತ್ತು ಸೂಕ್ತ ಸಮಯದಲ್ಲಿ ಅವುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಗೋಕಾಕ್ನ ಕಾಂಗ್ರೆಸ್ ನಾಯಕ ಹೇಳಿದರು