ರವಿ ಕುಮಾರ್
ರಾಜಕೀಯ
ಜೆಡಿಎಸ್ ಬಾಹ್ಯ ಬೆಂಬಲ ಕುರಿತಂತೆ ವರಿಷ್ಠರ ತೀರ್ಮಾನವೇ ಅಂತಿಮ: ರವಿಕುಮಾರ್
ಜೆಡಿಎಸ್ನಿಂದ ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಕೊಡುಗೆ ಬಂದರೆ ಕೇಂದ್ರದ ವರಿಷ್ಠರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿಜೆಪಿ ವಿಧಾನ .
ಬೆಂಗಳೂರು: ಜೆಡಿಎಸ್ನಿಂದ ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಕೊಡುಗೆ ಬಂದರೆ ಕೇಂದ್ರದ ವರಿಷ್ಠರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೂರಕ್ಕೆ ನೂರರಷ್ಟು ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಬೇರೆ ಯಾವುದೇ ಪಕ್ಷದ ಬೆಂಬಲವಿಲ್ಲದೆ ನಾವು ವಿಶ್ವಾಸಮತದಲ್ಲಿ ಗೆಲ್ಲುತ್ತೇವೆ ಎಂದು ಹೇಳಿದರು.
ನಿನ್ನೆ ಜೆಡಿಎಸ್ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಸಭೆಯ ಬಳಿಕ, ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಒಲವು ವ್ಯಕ್ತಪಡಿಸಿದರೆ, ಇನ್ನು ಕೆಲವು ಶಾಸಕರು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ