ಈಗ ವಿಧಾನಸಭೆ ವಿಸರ್ಜನೆ ಮಾಡಿ ಹೊಸದಾಗಿ ಚುನಾವಣೆಗೆ ಹೋಗಬೇಕೆಂದು ಸಲಹೆ ನೀಡುವ ಪರಿಸ್ಥಿತಿಯಲ್ಲೂ ನಾವಿಲ್ಲ. ನಾನೇನು ಶಾಸಕನೂ ಅಲ್ಲ, ಮಂತ್ರಿಯೂ ಅಲ್ಲ. ಆದರೆ ಮೈತ್ರಿ ಸರ್ಕಾರದ ಕಾರ್ಯವೈಖರಿ ಬದಲಾಗಬೇಕು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯೂ ಇದಕ್ಕೆ ಪರಿಹಾರವಲ್ಲ. ಏನು ಮಾಡಬೇಕು ಎಂದು ಪಕ್ಷದ ವರಿಷ್ಠರು ಈಗ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು, ಈ ಪರಿಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕುಮಾರಸ್ವಾಮಿಯವರನ್ನಾಗಲಿ, ದೇವೇಗೌಡರನ್ನಾಗಲೀ ದೂಷಿಸುವುದಿಲ್ಲ ಎಂದು ಹೇಳಿದರು.