ಬೆಂಗಳೂರು: ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಬಿಎಸ್ ವೈ ಪುತ್ರ ರಾಘವೇಂದ್ರ

ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬೇಟಿ ..
ಡಿ.ಕೆ ಶಿವಕುಮಾರ್ ರಾಘವೇಂದ್ರ ಬೇಟಿ
ಡಿ.ಕೆ ಶಿವಕುಮಾರ್ ರಾಘವೇಂದ್ರ ಬೇಟಿ
Updated on
ಬೆಂಗಳೂರು: ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 
ಬೆಂಗಳೂರಿನ ಡಿಕೆ ಶಿವಕುಮಾರ್ ಮನೆಯಲ್ಲಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಜೆಟ್ ನಲ್ಲಿ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು. 
ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು. 
ಶಿವಮೊಗ್ಗ ನೀರಾವರಿ ಯೋಜಮೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಶಿವಕುಮಾರ್ ಅವರ ಬಳಿ ಮನವಿ ಸಲ್ಲಿಸಿರುವುದಾಗಿ , ಸಂಸದ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com