ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಹೊಣೆಗೇಡಿತನದಿಂದ ಮಾತನಾಡುವುದು ಸರಿಯಲ್ಲ. ಸಿಬಿಐ ನ್ಯಾಯಾಲಯ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಖುಲಾಸೆಗೊಳಿಸಿದೆ, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವಂತೆ ತಾವು ಹಗುರವಾಗಿ ಮಾತನಾಡಬೇಡಿ, ರಾಜ್ಯದಲ್ಲಿ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿ, ದಿಕ್ಕೆಟ್ಟಿರುವ ನೀವು ನಿಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದಿದ್ದಾರೆ.