ಇಂದು ಬೆಳಗ್ಗೆಯಷ್ಟೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೇವೇಗೌಡ ಅವರು, ರಾಜ್ಯದ ದೋಸ್ತಿ ಸರ್ಕಾರ ಹೆಚ್ಚು ದಿನ ಬಾಳಿಕೆ ಬರುವಂತೆ ತೋರುತ್ತಿಲ್ಲ. ದೋಸ್ತಿ ಸರ್ಕಾರದ ಭವಿಷ್ಯ ಕಾಂಗ್ರೆಸ್ ಮುಖಂಡರ ಕೈಯಲ್ಲಿದೆ. ಹೀಗೆ ಮುಂದುವರಿದರೆ ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯವೇ ಇಲ್ಲ ಎಂದಿದ್ದರು. ದೇವೇಗೌಡರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು.