ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ; ಶಂಕರ್ ಗೆ ಪೌರಾಡಳಿತ, ನಾಗೇಶ್ ಗೆ ಶಿಕ್ಷಣ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 10 ದಿನಗಳ ...
ಸಚಿವರಾದ ಹೆಚ್ ನಾಗೇಶ್ ಮತ್ತು ಆರ್ ಶಂಕರ್
ಸಚಿವರಾದ ಹೆಚ್ ನಾಗೇಶ್ ಮತ್ತು ಆರ್ ಶಂಕರ್
Updated on
ಬೆಂಗಳೂರು:ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 10 ದಿನಗಳ ನಂತರ ಹೆಚ್ ನಾಗೇಶ್ ಮತ್ತು ಆರ್ ಶಂಕರ್ ಅವರಿಗೆ ಸೋಮವಾರ ಖಾತೆ ಹಂಚಿಕೆಯಾಗಲಿದೆ. 
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವಿದ್ದಿರಿಂದ ಸಚಿವರಿಗೆ ಖಾತೆ ಹಂಚಿಕೆ ಮುಂದೂಡಲ್ಪಟ್ಟಿತ್ತು. ಆರ್ ಶಂಕರ್ ಅವರಿಗೆ ಪೌರಾಡಳಿತ ಖಾತೆ ಸಿಗುವ ಸಾಧ್ಯತೆಯಿದೆ.
ಇದಕ್ಕೂ ಮುನ್ನ ಸಿ ಎಸ್ ಶಿವಳ್ಳಿಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲು ಪೌರಾಡಳಿತ ಖಾತೆ ವಹಿಸಿದ್ದ ರಮೇಶ್ ಜಾರಕಿಹೊಳಿಯವರಿಂದ ತೆಗೆದು ನೀಡಲಾಗಿತ್ತು. ಶಿವಳ್ಳಿಯವರ ನಿಧನದಿಂದ ಖಾತೆ ಖಾಲಿ ಉಳಿದಿತ್ತು. ಅದನ್ನು ಇದೀಗ ಆರ್ ಶಂಕರ್ ಗೆ ನೀಡಲಾಗುತ್ತಿದೆ. 
ಬಿಎಸ್ ಪಿ ಶಾಸಕ ಎನ್ ಮಹೇಶ್ ರಾಜೀನಾಮೆಯಿಂದ ತೆರವಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಹೆಚ್ ನಾಗೇಶ್ ಅವರಿಗೆ ಸಿಗುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com