ಹೆಸರಿನ ಮುಂದೆ ಗೌಡ ಸೇರ್ಪಡೆ ಹೇಳಿಕೆ ವಿವಾದ; ಸದಾನಂದ ಗೌಡರ ಸ್ಪಷ್ಟನೆ

ನನ್ನ ಹೆಸರಿನೊಂದಿಗೆ ಗೌಡ ಎಂದು ಸೇರಿಕೊಂಡಿರುವುದರಿಂದಲೇ ರಾಜ್ಯದ ಮುಖ್ಯಮಂತ್ರಿಯಾಗಿ ಈಗ ಕೇಂದ್ರ ಸಚಿವನಾಗಿದ್ದೇನೆ ...
ಕೇಂದ್ರ ಸಚಿವ ಸದಾನಂದ ಗೌಡ
ಕೇಂದ್ರ ಸಚಿವ ಸದಾನಂದ ಗೌಡ
Updated on
ಬೆಂಗಳೂರು: ನನ್ನ ಹೆಸರಿನೊಂದಿಗೆ ಗೌಡ ಎಂದು ಸೇರಿಕೊಂಡಿರುವುದರಿಂದಲೇ ರಾಜ್ಯದ ಮುಖ್ಯಮಂತ್ರಿಯಾಗಿ ಈಗ ಕೇಂದ್ರ ಸಚಿವನಾಗಿದ್ದೇನೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಇದು ಗೊತ್ತಾಗುತ್ತಿದ್ದಂತೆ ಸದಾನಂದ ಗೌಡರು ಟ್ವಿಟ್ಟರ್ ನಲ್ಲಿ ಅದಕ್ಕೆ ಪ್ರತಿಕ್ರಿಯೆ ಮತ್ತು ಸ್ಪಷ್ಟನೆ ನೀಡಿದ್ದಾರೆ. 'ನನ್ನ ಬಿಜೆಪಿ ಪಕ್ಷ ಹೆತ್ತ ತಾಯಿಗೆ ಸಮಾನ. ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ಹಳ್ಳಿ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ಹಾಗೂ ಪ್ರಾತಿನಿಧ್ಯವನ್ನು ನನ್ನ ಮೂಲಕ ನೀಡಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ ಎಂದು ಸದಾನಂದ ಗೌಡರು ಸಮಜಾಯಿಷಿ ನೀಡಿದ್ದಾರೆ.
ನಾನಿಂದು ನಿರಂತರ ಚುನಾವಣೆ ಗೆಲ್ಲಲ್ಲು, ಜಾತ್ಯತೀತ, ಪಕ್ಷಾತೀತವಾಗಿ ಜನ ನನ್ನನ್ನು ಆಯ್ಕೆ ಮಾಡಲು ಪಕ್ಷ ಹಾಗೂ ಪ್ರಧಾನಿ ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದು ಟ್ವೀಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com