ನಿನ್ನೆ ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯ ಟೀಕಿಸಿ 10 ಪ್ರಶ್ನೆಗಳನ್ನು ಹೊತ್ತ ಬಿಜೆಪಿಯ ಕಿರು ಹೊತ್ತಿಗೆಯನ್ನು ಬಿ ಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸಬೇಡಿ ಎಂದು ಹೇಳಿದ್ದಾರೆ. ಬರಗಾಲಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿದಿನ ಸಭೆ ನಡೆಸುತ್ತಿದ್ದು ಜಿಲ್ಲಾ ಮಟ್ಟದಲ್ಲಿ ಹಣ ನೀಡಲಾಗುತ್ತದೆ ಎಂದು ಹೇಳಿದರು.