ಲೀಲಾದೇವಿ ಪ್ರಸಾದ್, 1957ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಸಾಮಾಜಿಕ ರಾಜಕೀಯ ಬದುಕನ್ನು ಪ್ರಾರಂಭಿಸಿದ್ದರು. ಅಥಣಿ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿ, ಎಸ್. ಆರ್. ಬೊಮ್ಮಾಯಿ, ಹೆಚ್. ಡಿ. ದೇವೇಗೌಡ ಹಾಗೂ ಜೆ. ಎಚ್. ಪಟೇಲ್ ಅವರ ಸಂಪುಟದಲ್ಲಿ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವಜನ ಸೇವೆ, ವಾರ್ತಾ, ಕನ್ನಡ ಸಂಸ್ಕೃತಿ, ಸಣ್ಣ ನೀರಾವರಿ ಸಚಿವರಾಗಿದ್ದರು.