ಪಕ್ಷದಲ್ಲಿ ರಾಜ್ಯಾಧ್ಯಕ್ಷರಾದವರಿಗೆ ಗೌಡರ ಕುಟುಂಬದ ಹಸ್ತಕ್ಷೇಪದಿಂದ ಸ್ವತಂತ್ರ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ.ನೆಪಮಾತ್ರಕ್ಕೆ ಮಾತ್ರ ಅಧ್ಯಕ್ಷ ಸ್ಥಾನ ಎಂಬ ಕಾರಣ ನೀಡಿ ವಿಶ್ವನಾಥ್ ಅವರು ಪಕ್ಷದ ಸಾರಥ್ಯಕ್ಕೆ ರಾಜೀನಾಮೆ ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಹೆಚ್ ಕೆ ಕುಮಾರಸ್ವಾಮಿ, ತಮ್ಮಗಿನ್ನೂ ಆ ರೀತಿಯ ಯಾವುದೇ ಅನುಭವವಾಗಿಲ್ಲ .ಮಧ್ಯಂತರ ಚುನಾವಣೆ ಸಂದರ್ಭ ಎದುರಾಗಬಹುದು. ಇಂತಹ ಅನೀವಾರ್ಯ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷದಲ್ಲಿ ಸಂಘಟನೆ ಅನಿವಾರ್ಯ. ಹೀಗಾಗಿ ರಾಜ್ಯಾಧ್ಯಕ್ಷರ ನೇಮಕ ಮಾಡುತ್ತಿರಬಹುದು ಎಂದು ಹೇಳಿದರು.