ನಿಖಿಲ್ ಅವರನ್ನು ಮಂಡ್ಯದಿಂದ ಲೋಕಸಭೆ ಕಣಕ್ಕಿಳಿಸಲು ಜೆಡಿಎಸ್ ಯೋಜನೆ ರೂಪಿಸುತ್ತಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಅಲ್ಲಿ ಸುಮಲತಾ ಅವರು ಈ ಬಾರಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ,. ಈ ಹಿನ್ನೆಲೆಯಲ್ಲಿ ಮಂಡ್ಯ ಬದಲು ನಿಖಿಲ್ ಕುಮಾರ್ ಸ್ವಾಮಿಗೆ ಮೈಸೂರಿನಿಂದ ಸ್ಪರ್ಧಿಸಲು ವೇದಿಕೆ ಸಿದ್ದ ಪಡಿಸಲಾಗುತ್ತಿದೆ.