ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಹರಿಹಾಯ್ದರು, ವಾಯುಪಡೆ ದಾಳಿ ಬಗ್ಗೆ ಯಡಿಯೂರಪ್ಪ ಅವರ ಹೇಳಿಕೆಯನ್ನು ಗಮನಿಸಿದರೆ, ಇಡೀ ಬೆಳವಣಿಗೆ ಹಿಂದೆ ಷಡ್ಯಂತ್ರ ಇರುವ ಶಂಕೆ ಮೂಡುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲವೂ ಬಯಲಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 44 ಸೈನಿಕರನ್ನು ಬಲಿ ನೀಡುವ ಮೂಲಕ ಬಿಜೆಪಿ 22 ಸೀಟುಗಳನ್ನು ಗೆಲ್ಲಲು ಮುಂದಾಗಿದೆ. ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಿಕೆ ನೀಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.