ಬಡವರಿಗೆ ಒಳ್ಳೆಯ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಜವಾಬ್ದಾರಿ. ಬಡವರಿಗೆ ಮನೆ ಕೊಡುವುದು ತಮ್ಮ ಮತ್ತು ಪರಮೇಶ್ವರ್ ಉದ್ದೇಶವಾಗಿದೆ ಎಂದರು. 2 ಲಕ್ಷ ಮನೆ ನಿರ್ಮಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ಐವತ್ತು ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಒಂದು ಲಕ್ಷ ಕೋಟು ರೂ. ನೀಡಿಕೆ, 9 ತಿಂಗಳಲ್ಲಿ 14 ಲಕ್ಷ ರೈತ ಕುಟುಂಬಗಳಿಗೆ ಸಾಲಮನ್ನಾ ಮಾಡಲಾಗಿದೆ ಎಂದ ಅವರು, ಪ್ರಧಾನಿ ಮೋದಿ ಹುಸಿ ನುಡಿಯುತ್ತಿದ್ದು, ನರೇಂದ್ರ ಮೋದಿಯವರ ಕಾರ್ಯಕ್ರಮ ಬೆನ್ನಿಗೆ ಚೂರಿಹಾಕುವ ಸುಳ್ಳಿನ ಕಂತೆ ಎಂದು ಅವರು ಟೀಕಿಸಿದರು.