ಇಂದು ನೆಹರೂ ಮೈದಾನದಲ್ಲಿ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತ ವೈಮಾನಿಕ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದೆ. ಆದರೆ ಕೆಲ ಪಕ್ಷಗಳು ಈ ದಾಳಿಯನ್ನು ಅನುಮಾನದಿಂದ ನೋಡುತ್ತಿದ್ದು, ಹತರಾದ ಉಗ್ರ ಸಂಖ್ಯೆಯ ಬಗ್ಗೆ ಸಾಕ್ಷ್ಯ ಕೇಳುತ್ತಿವೆ. ಅವರಿಗೆ ಹತ್ಯೆಯಾದ ಉಗ್ರರ ಸಂಖ್ಯೆ ಬೇಕು. ಆದರೆ ಶೌರ್ಯವಂತರು ಮೃತ ದೇಹಗಳನ್ನು ಲೆಕ್ಕ ಹಾಕುವುದಿಲ್ಲ ಎಂದರು.