ಜೆಡಿಎಸ್ 3ಕ್ಕಿಂತ ಹೆಚ್ಚು ಸೀಟು ಗೆದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕಾಂಗ್ರೆಸ್ ಮಾಜಿ ಶಾಸಕ

ಜೆಡಿಎಸ್ ಗೆ ಎಷ್ಟು ಸೀಟು ಕೊಟ್ಟರು ಅವರು ಗೆಲ್ಲೋದು ಕೇವಲ 2 ರಿಂದ 3 ಮಾತ್ರ ಎಂದು ಎಂದು ಕಾಂಗ್ರೆಸ್ ಶಾಸಕ ಕೆ,ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.
ಕೆಎನ್ ರಾಜಣ್ಣ
ಕೆಎನ್ ರಾಜಣ್ಣ
ತುಮಕೂರು: ಜೆಡಿಎಸ್ ಗೆ ಎಷ್ಟು ಸೀಟು ಕೊಟ್ಟರು  ಅವರು ಗೆಲ್ಲೋದು ಕೇವಲ 2 ರಿಂದ 3 ಮಾತ್ರ ಎಂದು  ಎಂದು ಕಾಂಗ್ರೆಸ್  ಮಾಜಿ ಶಾಸಕ ಕೆ,ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಕೆ.ಎನ್.ರಾಜಣ್ಣ, ತುಮಕೂರು ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ದೇವೇಗೌಡರ ವಿರುದ್ಧ ಕಿಡಿಕಾರಿದ್ದಾರೆ.
ಜೆಡಿಎಸ್‌ನವರು 3ಕ್ಕೆ ಹೆಚ್ಚು ಸೀಟ್ ಗೆದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಮಂಡ್ಯ, ಹಾಸನದಲ್ಲಿ ಜೆಡಿಎಸ್ ಗೆಲುವು ಸುಲಭವಲ್ಲಾ. ನಾವು ಸನ್ಯಾಸಿಗಳಲ್ಲ. ನಾವು ನಮ್ಮ ನಮ್ಮ ಅನಿಸಿಕೆಗಳನ್ನ ಕಾರ್ಯಗತ ಮಾಡಲು ಏನೆಲ್ಲಾ ಮಾಡಬೇಕು ಅದನ್ನೆಲ್ಲಾ ಮಾಡ್ತಿವಿ ಎಂದು ಹೇಳುವ ಮೂಲಕ, ರಾಜ್ಯದಲ್ಲಿ ಜೆಡಿಎಸ್ ಸೋಲಿಸಲು ರಣತಂತ್ರ ರೂಪಿಸ್ತಿನಿ ಎಂದು ಕೆ.ಎನ್.ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ .
ಹಾಸನ, ಮಂಡ್ಯ, ‌ಬೆಂಗಳೂರು ನಗರದ ರಾಜಕೀಯ ಮುಖಂಡರೊಂದಿಗೆ ಸಂಪರ್ಕದಲ್ಲಿ ಇದ್ದೇವೆ. ನಾವೆಲ್ಲರೂ ಏನು ಮಾಡಬೇಕು ಅದನ್ನ ಮಾಡುತ್ತೇವೆ. ತುಮಕೂರಿನಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಟ್ಟರೆ ನಾನು ಪಕ್ಷೇತರವಾಗಿಯಾದರೂ ಸ್ಪರ್ಧಿಸ್ತೇನೆ. ಕಾಂಗ್ರೆಸ್ ಪಕ್ಷ ಉಳಿಸುವಗೋಸ್ಕರ ನಾನು ಸ್ಪರ್ಧೆ ಮಾಡ್ತಿನಿ ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಾ ಇದೆ. ಜೆಡಿಎಸ್ ನವರನ್ನ ಹೀಗೆ ಬಿಟ್ಟರೆ ಕಾಂಗ್ರೆಸ್ ಸಂಪೂರ್ಣ ನಿರ್ನಾಮ ಅಗಲಿದೆ. ಹಾಗಾಗಿ ಕಾಂಗ್ರೆಸ್ ಉಳಿಸಲು ಏನು ಮಾಡಬೇಕು ಅದನ್ನೆಲ್ಲಾ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com