ಬಳಿಕ ಮಾತನಾಡಿದ ಶಾಸಕ ಪ್ರೀತಂ ಗೌಡ ಅವರು, ಹಾಸನದಲ್ಲಿ ಈ ಬಾರಿ ಬಿಜೆಪಿ ಗೆಲ್ಲಿಸಲು ಶತ ಪ್ರಯತ್ನ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಲು ಲೋಕಸಭಾ ಚುನಾವಣೆ ಗೆಲ್ಲಲು ಮಾಜಿ ಸಚಿವ ಎ,ಮಂಜು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಬಿಜೆಪಿಗೆ ಸ್ವಾಗತ ಮಾಡುತ್ತೇನೆ. ಜೆಡಿಎಸ್ ಗೆ ಪರ್ಯಾಯವಾಗಿ ನಿಲ್ಲಲು ಮಾಜಿ ಸಚಿವ ಎ,ಮಂಜು ಬಿಜೆಪಿಗೆ ಆಗಮಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ದ್ವಿಗುಣವಾಗಿದೆ ಎಂದು ತಿಳಿಸಿದರು.