ಯಡಿಯೂರಪ್ಪ ಅವರದ್ದು ಎಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ?, ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕು. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಮುಖಂಡರು, ಈಗ ಯಾವುದೇ ದೂರು ನೀಡದೇ ಇರಲು ಕಾರಣವೇನು?, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ಸಿನ ಯಾವ ಯಾವ ನಾಯಕರಿಗೆ ಹಣ ಸಂದಾಯವಾಗಿದೆ ಎನ್ನುವುದು ನಮೂದಾಗಿತ್ತು. ಆಗ ಕಾಂಗ್ರೆಸ್ ಮುಖಂಡರು ಮುಜುಗರಕ್ಕೆ ಸಿಕ್ಕಿದ್ದಾಗಲೇ ಯಡಿಯೂರಪ್ಪ ಅವರ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ ?, ಬಿಜೆಪಿ ನಾಯಕರದ್ದೆನ್ನಲಾದ ಡೈರಿ ಪ್ರಕರಣವು ಲೋಕಪಾಲ ತನಿಖೆ ನಡೆಸಲು ಯೋಗ್ಯವಾಗಿದೆ ಎಂದು ಕಾಂಗ್ರೆಸ್ ಹೇಳಿದ್ದಾರೆ. ಆದರೆ ಆರೋಪ ಮಾಡಿದವರು ದೂರು ನೀಡಬೇಕೇ ಅಥವಾ ದೂರಿಗೆ ಒಳಗಾದವರೇ ? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.