ಬೆಂಗಳೂರು: ಐಟಿ ದಾಳಿಗೆ ಆಕ್ರೋಶ, ಆದಾಯ ತೆರಿಗೆ ಇಲಾಖೆ ಕಚೇರಿ ಬಳಿ ಕಾಂಗ್ರೆಸ್- ಜೆಡಿಎಸ್ ಪ್ರತಿಭಟನೆ

ಸಚಿವರು, ಬೆಂಬಲಿಗರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಯನ್ನು ಖಂಡಿಸಿ ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರು ಕೇಂದ್ರ ಆದಾಯ ತೆರಿಗೆ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ
ಪ್ರತಿಭಟನೆ
ಪ್ರತಿಭಟನೆ
Updated on

ಬೆಂಗಳೂರು: ಸಚಿವರು, ಬೆಂಬಲಿಗರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಯನ್ನು ಖಂಡಿಸಿ  ಕಾಂಗ್ರೆಸ್ - ಜೆಡಿಎಸ್  ಕಾರ್ಯಕರ್ತರು  ಕೇಂದ್ರ ಆದಾಯ ತೆರಿಗೆ ಇಲಾಖೆ ಕಚೇರಿ ಮುಂಭಾಗ  ಪ್ರತಿಭಟನೆ ನಡೆಸುತ್ತಿದ್ದಾರೆ

ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಧರಣಿ ನಡೆಸುತ್ತಿದ್ದು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್,  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್  ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ  ಪಾಲ್ಗೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್, ಜೆಡಿಎಸ್ ಮುಖಂಡರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ - ಜೆಡಿಎಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com