ಖರ್ಗೆ ವಿರುದ್ದ ಹೋರಾಟ ನಡೆಸಿ, ಟಿಕೆಟ್ ಗೋಸ್ಕರ ಕಾಲಿಗೆ ಬಿದ್ದ ಸುಭಾಷ್ ರಾಥೋಡ್ ನೀತಿಗೆಟ್ಟವನು: ಉಮೇಶ್ ಜಾಧವ್

ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವುದನ್ನು ಮುಂದುವರೆಸಿರುವ ಮಾಜಿ ಶಾಸಕ ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಿಂಚೋಳಿ: ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವುದನ್ನು ಮುಂದುವರೆಸಿರುವ ಮಾಜಿ ಶಾಸಕ ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಪ್ರಚಾರವನ್ನು ಪ್ರಾರಂಭಿಸುವುದಕ್ಕೂ ಮುನ್ನ ಇಂದು ಚಿಂಚೋಳಿಯ ತಮ್ಮ  ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ಕಾರು ಪಕ್ಷಗಳನ್ನು ತಿರುಗಿ ಬಂದ ಸುಭಾಷ್ ರಾಥೋಡ್ ನೀತಿಗೆಟ್ಟವನು. ನನ್ನ ಬಗ್ಗೆ ಹಾಗೂ ನನ್ನ ಮಗನ ಬಗ್ಗೆ ಮಾತನಾಡಲು ಅವನಿಗೆ ಅಧಿಕಾರವಿಲ್ಲ ಎಂದು ಟೀಕಿಸಿದರು.
ಖರ್ಗೆ ವಿರುದ್ದ ತನ್ನ ಜೀವನ ಪೂರ್ತಿ ಹೋರಾಟವನ್ನು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ನಡೆಸಿಕೊಂಡು ಬಂದಿದ್ದಾನೆ. ಈಗ ಟಿಕೆಟ್ ಗೋಸ್ಕರ ಅವರ ಕಾಲಿಗೆ ಬಿದ್ದ ತನ್ನ ತನವನ್ನು ತೋರಿಸಿಕೊಟ್ಟಿದ್ದಾನೆ. ನನ್ನ  ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ಪಕ್ಷವನ್ನು ತೊರದಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com