ಕುಂದಗೋಳ ಉಪ ಚುನಾವಣೆ: ಪ್ರಚಾರದ ವೇಳೆ ಕಣ್ಣೀರು ಹಾಕಿದ ಡಿಕೆಶಿ

ಕುಂದಗೋಳ ವಿಧಾನಸಭೆ ಉಪಚುನಾವಣೆಯ ಪ್ರಚಾರದ ಉಸ್ತುವಾರಿ ಹೊತ್ತಿರುವ ಸಚಿವ ಡಿ.ಕೆ.ಶಿವಕುಮಾರ್​ ಅವರು ಗುರುವಾರ ಮಾಜಿ ಸಚಿವ...
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Updated on
ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪಚುನಾವಣೆಯ ಪ್ರಚಾರದ ಉಸ್ತುವಾರಿ ಹೊತ್ತಿರುವ ಸಚಿವ ಡಿ.ಕೆ.ಶಿವಕುಮಾರ್​ ಅವರು ಗುರುವಾರ ಮಾಜಿ ಸಚಿವ ದಿ. ಸಿ.ಎಸ್.ಶಿವಳ್ಳಿ ಅವರನ್ನು ನನೆದು ಕಣ್ಣೀರು ಹಾಕಿದರು.
ಇಂದು ಇಂಗಳಗಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿದ ಡಿಕೆಶಿ, ಶಿವಳ್ಳಿ ಅವರು ಜಾತಿ ನೋಡದೆ ಎಲ್ಲರ ಸೇವೆ ಮಾಡಿದರು. ಕೊನೆಯವರೆಗೂ ಬಡವರ ಪರ ಕೆಲಸ ಮಾಡಿದರು. ನಿಮ್ಮ ಮುಂದೆ ನಿಂತು ಮತಯಾಚನೆ ಮಾಡುತ್ತಿದ್ದೇನೆ. ಇದು ಶಿವಳ್ಳಿ ಚುನಾವಣೆಯಲ್ಲ. ನಿಮ್ಮ ಚುನಾವಣೆ. ನಿಮ್ಮೆಲ್ಲರ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ. ಶಿವಳ್ಳಿಯನ್ನು ಉಳಿಸಿಕೊಳ್ಳಿ ಎಂದು ಅಳುತ್ತಲೇ ಹೇಳಿದರು.
ಶಿವಳ್ಳಿ ಅವರ ನಿಧನದ ನಂತರ ಕುಸುಮಕ್ಕ ನಮ್ಮ ಮನೆಗಾಗಲಿ, ದಿನೇಶ್​ ಗುಂಡೂರಾವ್​ ಅವರ ಮನೆಗಾಗಲೀ ಬಂದು ಚುನಾವಣೆಯಲ್ಲಿ ಸೀಟು ಕೊಡಿ ಎಂದು ಕೇಳಲಿಲ್ಲ. ಕಾರ್ಯಕರ್ತರೇ ನಿರ್ಧರಿಸಿದ್ದಾರೆ. ಕುಸುಮಕ್ಕನನ್ನು ಗೆಲ್ಲಿಸಿಕೊಡಿ ಎಂದು ಹೇಳುತ್ತ ಸಚಿವರು ಭಾವುಕರಾದರು.
ನನ್ನ ಕ್ಷೇತ್ರವನ್ನು ಹೇಗೆ ನೋಡಿಕೊಳ್ಳುತ್ತಿದ್ದೇನೋ, ಹಾಗೇ ಕುಂದಗೋಳವನ್ನೂ ನೋಡಿಕೊಳ್ಳುತ್ತೇನೆ. ನಾನು ಮತಕ್ಕಾಗಿ ಕಣ್ಣೀರು ಹಾಕುವವನಲ್ಲ. ಶಿವಳ್ಳಿ ಜತೆಗಿನ ನನ್ನ ಸ್ನೇಹ ಹಾಗಿತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com