ತೇಜಸ್ವಿನಿ ಅನಂತ್ ಕುಮಾರ್ ಬಾಯಿ ಬಿಟ್ಟರೇ ನಿಮ್ಮ ನಿಜ ಬಣ್ಣ ಬಯಲಾಗಲಿದೆ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!

ಕುಂದಗೋಳ ಸಚಿವ ಸಿ.ಎಸ್ ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಸಮನ್ವಯ ಸಮಿತಿ...
ತೇಜಸ್ವಿನಿ ಅನಂತ್ ಕುಮಾರ್ ಮತ್ತು ಸಿದ್ದರಾಮಯ್ಯ
ತೇಜಸ್ವಿನಿ ಅನಂತ್ ಕುಮಾರ್ ಮತ್ತು ಸಿದ್ದರಾಮಯ್ಯ
Updated on
ಬೆಂಗಳೂರು: ಕುಂದಗೋಳ ಸಚಿವ ಸಿ.ಎಸ್ ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕರು, ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ನಾಲಗೆ ಹರಿಬಿಟ್ಟಿದ್ದಾರೆ, ನಮ್ಮ ವಿರುದ್ಧ ಆರೋಪ ಮಾಡುವ ಮೊದಲು, ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ನೀಡಿರುವ ಕಿರುಕುಳ ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ತಮಗೆ ಆಗಿರುವ ಅಪಮಾನ ಕಿರುಕುಳವನ್ನು ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣು ಮಗಳು ತೇಜಸ್ವಿನಿ ಬಾಯಿ ಬಿಟ್ಟರೆ ಬಿಜೆಪಿ ನಾಯಕರ ಬಂಡವಾಳ ಬಯಲಾಗುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com