ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿಲ್ಲ- ಡಿ ಕೆ ಶಿವಕುಮಾರ್

ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಲೇ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಲೇ ಇದೆ ಎಂದು  ಜಲಸಂಪನ್ಮೂಲ  ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಸರ್ಕಾರ ಪತನಗೊಳಿಸುವುದಾಗಿ ಬಿಜೆಪಿ ಮುಖಂಡರು ಹೇಳುತ್ತಲೇ ಬಂದಿದ್ದಾರೆ. ಹೇಗೆ ಸರ್ಕಾರವನ್ನು ಬದಲಾವಣೆ ಮಾಡಲು ಸಾಧ್ಯ,ಪಕ್ಷಾಂತರ ವಿರೋಧಿ ಕಾನೂನು ಇದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಜೆಪಿ ಸರ್ಕಾರ ಮಾಡ್ತೀವಿ ಅಂತಾ ಹಗಲು ಗನಸು ಕಾಣುತ್ತಿದ್ದಾರೆ ಅಷ್ಟೇ. ಯಾವ ಕಾಂಗ್ರೆಸ್ ಶಾಸಕರೂ ಅವರ ಕೈ ಗೆ ಸಿಗಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಬಿಜೆಪಿ ಜೊತೆ ಗುರುತಿಸಿಕೊಂಡಿಲ್ಲ. ಒಬ್ಬರು ಮಾತ್ರ ಗುರುತಿಸಿಕೊಂಡಿದ್ದರು. ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com