ಲಿಂಗಾಯತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ, ಬಿಎಸ್ ವೈ ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು

ಲಿಂಗಾಯಿತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ

ಬೆಂಗಳೂರು: ಲಿಂಗಾಯಿತರು ಕಾಂಗ್ರೆಸ್ ಗೆ  ಮತ ಹಾಕಿದರೆ ಅಪರಾಧ ಮಾಡಿದ್ದಂತೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.

ವೀರೆಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯಿತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಯಡಿಯೂರಪ್ಪ ಚುನಾವಣಾ ಪ್ರಚಾರದ ವೇಳೆಯಲ್ಲಿ ಹೇಳಿಕೆ ನೀಡಿದ್ದರು.

ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಂದು ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಇಂತಹ ಹೇಳಿಕೆಯನ್ನು ಯಡಿಯೂರಪ್ಪ ನೀಡದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

 ವೀರೆಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯಿತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಯಡಿಯೂರಪ್ಪ ಚುನಾವಣಾ ಪ್ರಚಾರದ ವೇಳೆಯಲ್ಲಿ ಹೇಳಿಕೆ ನೀಡಿದ್ದರು.

ಯಡಿಯೂರಪ್ಪ ತಮ್ಮ ಸ್ಥಾನದ ಘನತೆಯನ್ನು ಮರೆತು ಜಾತಿಯಾಧಾರಿತವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡಿದ್ದಾರೆ.ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಅವರು ಜನಪ್ರತಿನಿಧಿ ಕಾಯ್ದೆ ನಿಯಮ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಚುನಾವಣಾ ಪ್ರಚಾರದಿಂದ ನಿರ್ಬಂಧಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com