ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಚಿಂಚೋಳಿ ಕ್ಷೇತ್ರ ವ್ಯಾಪ್ತಿಯ ಕನಪುರದಲ್ಲಿ ಪ್ರಚಾರ ಮುಗಿಸಿ ವಾಪಾಸ್ಸಾಗುತ್ತಿದ್ದ ಸುಭಾಷ್ ರಾಠೋಡ್ ಅಪಘಾತದಿಂದಾಗಿ ರಸ್ತೆ ಮೇಲೆ ಬಿದ್ದಿದ್ದ ವ್ಯಕ್ತಿಯನ್ನು ಗಮನಿಸಿದ್ದಾರೆ. ನಂತರ ಆತನನ್ನು ತನ್ನ ಪ್ರಚಾರ ವಾಹನದಲ್ಲಿ ತೆಗೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಒದಗಿಸಿದ್ದಾರೆ.
ಗಾಯಾಳು ಭಾಸ್ಕರ್ ಮಲ್ಲಿಕಾರ್ಜುನ್ ಎಂಬುದು ತಿಳಿದುಬಂದಿದೆ. ಬೈಕ್ ಅಪಘಾತದಿಂದಾಗಿ ರಸ್ತೆ ಮೇಲೆ ಬಿದ್ದಿದ್ದನ್ನು ಕಂಡ ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಪ್ರಾಣಾಪಾಯದಿಂದ ಸುಭಾಷ್ ರಾಠೋಡ್ ಪಾರು ಮಾಡಿದ್ದಾರೆ. ಇವರ ಈ ಕಾರ್ಯಕ್ಕೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.
Advertisement