ಗಾಂಧೀಜಿ ಹಂತಕ ನಾಥುರಾಮ್ ಗೋಡ್ಸೆ ಪರ ಸಾದ್ವಿ ಪ್ರಗ್ಯಾಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ಅದಕ್ಕೆ ಬೆಂಬಲ ನೀಡಿ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಇದೀಗ ತಮ್ಮ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅವರು, 'ನನ್ನ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಹೀಗಾಗಿ ಕೆಲವು ಟ್ವೀಟ್ ಗಳು ಪೋಸ್ಟ್ ಆಗಿವೆ ಎಂದು ಅವರು ಹೇಳಿದ್ದಾರೆ.