ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟಿದ್ದು, ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುವ ಮೂಲಕ ಮತಗಳ ಧೃವೀಕರಣವಾಗಲು ಆಸ್ಪದ ಮಾಡಿಕೊಟ್ಟಿದ್ದೇ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವೆಂದು ಹೇಳಿಕೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಲು ದಿನೇಶ್ ಗುಂಡೂರಾವ್ ಅಸಮರ್ಥ . ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರೋಷನ್ ಬೇಗ್ ಆಗ್ರಹಿಸಿದ್ದರು.