ಕಾಂಗ್ರೆಸ್-ಜೆಡಿಎಸ್ ನಾಯಕರ ತೀರ್ಮಾನದ ಮೇಲೆ ರಾಜ್ಯ ರಾಜಕೀಯ ಭವಿಷ್ಯ ನಿಂತಿದೆ-ಬಿಎಸ್ ವೈ

ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ...
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on

ಬೆಂಗಳೂರು: ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್ - ಜೆಡಿಎಸ್ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ರಾಜ್ಯ ರಾಜಕಾರಣ ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೂಚ್ಯವಾಗಿ ಹೇಳಿದ್ದಾರೆ

ಇದೇ 29 ಕ್ಕೆ ದೆಹಲಿಗೆ ತೆರಳುತ್ತೇನೆ, ರಾಜ್ಯದ ಸಂಸದರೆಲ್ಲ ಅಂದು ದೆಹಲಿಗೆ ಆಗಮಿಸುತ್ತಾರೆ, ಈಗ ನಾನು ಏನನ್ನೂ ಹೇಳುವುದಿಲ್ಲ, ಜನರ ತೀರ್ಮಾನದಂತೆ ಕಾಂಗ್ರೆಸ್, ಜೆಡಿಎಸ್ ನಡೆದುಕೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ನಾನು 40 ವರ್ಷಗಳ ಕಾಲ ರಾಜ್ಯ ಸುತ್ತಿ ಅನುಭವ ಪಡೆದಿದ್ದೇನೆ, ಸರ್ಕಾರದ ಅಳಿವು ಉಳಿವಿನ ಬಗ್ಗೆ ನಾನು ಈಗಲೇ ಏನನ್ನೂ ಹೇಳುವುದಿಲ್ಲ. ರಾಷ್ಟ್ರೀಯ ನಾಯಕರ ಜೊತೆ ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ ಬಗ್ಗೆ ಕೇಳಿದಾಗ, ನಾವಾಗಿಯೇ ಅವರನ್ನು ಪಕ್ಷಕ್ಕೆ ಬರುವಂತೆ ಕರೆಯುವುದಿಲ್ಲ, ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com