ಈ ಮಧ್ಯೆ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ಹಲವು ಅತೃಪ್ತ ಶಾಸಕರನ್ನು ಸಂಪುಟಕ್ಕೆ ಸೇರಿಸಲು ವೇದಿಕೆ ಸಿದ್ದವಾಗುತ್ತಿದೆ. ಬೆಳಗಾವಿಯ ಶಾಸಕ ಸುರೇಶ್ ಅಂಗಡಿ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಮದ್ಯೆ ಬಿಜೆಪಿ ನಾಯಕರ ಒಂದು ವರ್ಗ ಸರ್ಕಾರವನ್ನು ಅಸ್ಥಿರಗೊಳಿಸಲು ಸರಿಯಾದ ಸಮಯಕ್ಕೆ ಕಾಯುತ್ತಿದೆ. ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಬಿಜೆಪಿಯ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.