ಚುನಾವಣೆ ಬೆನ್ನಲ್ಲೇ ಆಸ್ಟ್ರೇಲಿಯಾ ಪ್ರವಾಸಕ್ಕೆ ಹಾರಿದ್ದ ಡಿಕೆ ಶಿವಕುಮಾರ್ ಫಲಿತಾಂಶ ಪ್ರಕಟಣೆ ಬಳಿಕ ತವರಿಗೆ ವಾಪಸಾಗಿದ್ದು, ಬಳಿಕ ಇದೇ ಮೊದಲ ಬಾರಿಗೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದೇ ಒಂದು ಸ್ಥಾನ ಗೆಲ್ಲಲು ಮಾತ್ರ ಸಾಧ್ಯವಾಗಿದ್ದು, ಖರ್ಗೆ, ದೇವೇಗೌಡರಂತಹ ಹಿರಿಯ ನಾಯಕರೇ ಸೋಲು ಕಂಡಿರುವುದು ತಮಗೆ ಆಘಾತವನ್ನುಂಟು ಮಾಡಿದೆ ಎಂದು ಶಿವಕುಮಾರ್ ಹೇಳಿದ್ದಾರೆ.