ಭಿನ್ನಮತೀಯರ ಶಮನಕ್ಕೆ ಕೊನೆಯ ಅಸ್ರ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ

ಭಿನ್ನಮತೀಯರನ್ನು ಶಮನಗೊಳಿಸಿ ಸರ್ಕಾರವನ್ನು ಉಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ...
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
Updated on
ಬೆಂಗಳೂರು: ಭಿನ್ನಮತೀಯರನ್ನು ಶಮನಗೊಳಿಸಿ ಸರ್ಕಾರವನ್ನು ಉಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟವನ್ನು ವಿಸ್ತರಿಸಲು ಅದರ ನಾಯಕರು ನಿರ್ಧರಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಡುವೆ ಭಿನ್ನಮತೀಯರ ನಿಲುವಿನಿಂದ ಬಚಾವಾಗಿ ಮೈತ್ರಿ ಸರ್ಕಾರವನ್ನು ಉಳಿಸಿ ಅದನ್ನು ಸುಗಮವಾಗಿ ಮುನ್ನಡೆಸುವ ಒತ್ತಡ ಕಾಂಗ್ರೆಸ್-ಜೆಡಿಎಸ್ ಗೆ ಇಂದು ಇರುವ ಸಂದರ್ಭದಲ್ಲಿ ಕಾಂಗ್ರೆಸ್ ನ ಶಾಸಕರಾದ ಕೆ ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿಯಂತವರು ಕಳೆದ ಭಾನುವಾರ ಎಸ್ ಎಂ ಕೃಷ್ಣ ನಿವಾಸದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು. ಇದು ಇನ್ನಷ್ಟು ಆತಂಕವನ್ನು ಮೈತ್ರಿಕೂಟದ ನಾಯಕರಿಗೆ ತಂದೊಡ್ಡಿದೆ. ಇದರಿಂದಾಗಿ ಕೂಡಲೇ ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಮೂರು ಸಚಿವ ಸ್ಥಾನಗಳನ್ನು ತುಂಬಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com