ಕಂಪ್ಲಿ ಶಾಸಕ ಗಣೇಶ್ ಅಮಾನತು ಹಿಂಪಡೆದ ಕಾಂಗ್ರೆಸ್‌

ಮಹತ್ವದ ಬೆಳವಣಿಗೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂಪಡೆದಿದೆ.
ಜೆಎನ್ ಗಣೇಶ್
ಜೆಎನ್ ಗಣೇಶ್
Updated on
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಬುಧವಾರ ಹಿಂಪಡೆದಿದೆ.
ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದ ಗಲಾಟೆ ಬಳಿಕ ಕಂಪ್ಲಿ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಅಮಾನತು ಮಾಡಿತ್ತು. ಆದರೆ ಇದೀಗ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ. 
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚರ್ಚಿಸಿ ಅಮಾನತು ಆದೇಶ ಹಿಂದಕ್ಕೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದ ನಂತರ ರಾಜ್ಯದಲ್ಲಿ ಆಪರೇಷನ್ ಕಮಲದ ಆಪತ್ತು ಎದುರಾಗಿದ್ದು, ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಫಲವಾಗಿ ಗಣೇಶ್ ಅಮಾನತು ಹಿಂಪಡೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com