7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು

ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.
ಅರವಿಂದ್ ಲಿಂಬಾವಳಿ
ಅರವಿಂದ್ ಲಿಂಬಾವಳಿ
Updated on

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ. 

ಸರ್ಕಾರ ಪತನವಾಗುವುದನ್ನು ತಡೆಯಲು ಮತ್ತೆ ಆಪರೇಷನ್ ಕಮಲ ನಡೆಸುವ ಸುಳಿವನ್ನು ಶಾಸಕ ಅರವಿಂದ ಲಿಂಬಾವಳಿ ನೀಡಿದ್ದಾರೆ.

ಯಶವಂತಪುರ ವಿಧಾನ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮ ಶೇಖರ್ ಪರ ಬಂಡೆಮಠದಲ್ಲಿ ಸಮುದಾಯದ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ಜೆಡಿಎಸ್​​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಫಲಿತಾಂಶ ಬಂದ ಬಳಿಕ ರಾಜಕೀಯ ಧ್ರುವೀಕರಣ ಆಗಲಿದೆ. ನಮ್ಮ ಸಂಪಕರ್ದಲ್ಲಿರುವರು ಯಾವೆಲ್ಲಾ,ಯಾರೆಲ್ಲಾ ಶಾಸಕರಿದ್ದಾರೆ? ಎಷ್ಟು ಜನ ಇದ್ದಾರೆ? ಎಂಬುದು ಚುನಾವಣೆ ಫಲಿತಾಂಶದ ಬಳಿಕ ತಿಳಿಯಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com