ಕೆ.ಜೆ.ಜಾರ್ಜ್ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯ ಹುಂಡಿ ಬಹಿರಂಗ: ಬಿ.ಸಿ.ಪಾಟೀಲ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಜೆ. ಜಾರ್ಜ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯರ ಹುಂಡಿ ಎಲ್ಲೆಲ್ಲಿದೆ ಎಂಬುದು ಗೊತ್ತಾಗಲಿದೆ. ಆಗ ಯಾರು ನಾಲಾಯಕ್ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾವೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಜೆ. ಜಾರ್ಜ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯರ ಹುಂಡಿ ಎಲ್ಲೆಲ್ಲಿದೆ ಎಂಬುದು ಗೊತ್ತಾಗಲಿದೆ. ಆಗ ಯಾರು ನಾಲಾಯಕ್ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಹಿರೆಕೇರೂರಿನ ತಮ್ಮ ಸ್ವಗ್ರಹದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ನಾಲಾಯಕ್ ಅಂದರೆ ನೀವೂ ನಾಲಾಯಕ್ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಕುರಿ ಕೋಳಿ ಎಮ್ಮೆ ಥರ ಶಾಸಕರು ಮಾರಾಟ ಆದರು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದಾಗ ಎಷ್ಟು ಕೋಟಿಗೆ ತಮ್ಮನ್ನು ಮಾರಿಕೊಂಡಿದ್ದರು. ಅವರು ಮಾರಿಕೊಂಡಿರುವುದಕ್ಕಾಗಿ ಅವರಿಗೆ ಈ ಮಾರಾಟ ಸಂಸ್ಕೃತಿಯ ಬಗ್ಗೆ ಅರಿವಿದೆ ಎಂದು ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಹಿಂದೆ ಬಿಸಿ ಪಾಟೀಲ್ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದ ಸಿದ್ದರಾಮಯ್ಯ ಅವರು, 'ಬಿ.ಸಿ ಪಾಟೀಲ್ ಒಳ್ಳೆಯ ಪೊಲೀಸ್ ಆಗಿರಲಿಲ್ಲ ಹಾಗೂ ಒಳ್ಳೆಯ ಶಾಸಕನೂ ಅಲ್ಲ' ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಈ ಟ್ವೀಟ್ ಗೆ ಬಿಸಿ ಪಾಟೀಲ್ ಇದೀಗ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com