' ಅನರ್ಹ ಶಾಸಕರು ಸಂತೆಯಲ್ಲಿ ದನಗಳಂತೆ ಮಾರಾಟವಾಗಿದ್ದಾರೆ' 

ಅನರ್ಹ ಶಾಸಕರು ಮಾರುಕಟ್ಟೆಯಲ್ಲಿ ದನಗಳಂತೆ ಮಾರಾಟವಾಗಿದ್ದಾರೆ,  ಸಂತೆಯಲ್ಲಿ ಪಶುಗಳಂತೆ ಮಾರಾಟವಾದ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಳಗಾವಿ: ಅನರ್ಹ ಶಾಸಕರು ಮಾರುಕಟ್ಟೆಯಲ್ಲಿ ದನಗಳಂತೆ ಮಾರಾಟವಾಗಿದ್ದಾರೆ,  ಸಂತೆಯಲ್ಲಿ ಪಶುಗಳಂತೆ ಮಾರಾಟವಾದ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಥಣಿಯ ತೆಲಸಂಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರ ಪ್ರಚಾರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ. ಇದು ಯಾರಿಗೂ ಬೇಡವಾದ ಚುನಾವಣೆ. ಇದರಿಂದ ಯಾರಿಗೆ ಗೆ ಲಾಭ? ನಿಮಗೆ ಲಾಭವಾಗಿಲ್ಲ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್​​ ಅವರಿಗೆ ಲಾಭವಾಗಿದೆ.  ಅಭಿವೃದ್ಧಿಗಾಗಿ ಕಾಂಗ್ರೆಸ್ ಬಿಟ್ಟಿರುವುದಾಗಿ ಹೇಳುತ್ತಿರುವುದು ಅನರ್ಹ ಶಾಸಕರು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. 


ನಿಮ್ಮನ್ನು ಕೇಳದೆ ಬಿಜೆಪಿಗೆ ಹೋಗಿದ್ದು ನಿಮ್ಮನ್ನು ಅವಮಾನ ಮಾಡಿದಂತೆ ಈಗ ನಿಮಗೆ ಅವಕಾಶ ಬಂದಿದೆ. ಕುಮಟಳ್ಳಿ ಸ್ವಂತ ಊರು ತೆಲಸಂಗಕ್ಕೆ ಅವಮಾಡಿದ್ದಾರೆ. ಅಗೌರವ ಮಾಡಿದ ಮಹೇಶ ಕುಮಟಳ್ಳಿ ನೀವು ಎಂಎಲ್ಎ ಆಗಲು ಯೋಗ್ಯರಲ್ಲ ಎಂದು ಹೇಳುವಂತೆ ಮತದಾರರಿಗ ಕರೆ ನೀಡಿದರು, 

ಅನರ್ಹರೆಂದರೆ ಎಂಎಲ್ಎ ಆಗಲು ನಾಲಾಯಕ್ ಎಂದರ್ಥ ನಾಲಾಯಕ್ ಮನುಷ್ಯ ಮತ್ತೆ ತನ್ನನ್ನು ಲಾಯಕ್ ಮಾಡು‌ ಎಂದು ನಿಮ್ಮ ಬಳಿ ಬರ್ತಾನೆ ಆಗ ನೀವು ಸುಪ್ರೀಂ ಕೋರ್ಟ್ ನಿನ್ನನ್ನು ಅನರ್ಹ ಮಾಡಿದೆ ಎಂದು ಪರ್ಮನೆಂಟಾಗಿ ಮನೆಗೆ ಕಳುಹಿಸಿ ಎಂದು  ಅಥಣಿ ಮತದಾರರಿಗೆ ಸಿದ್ದರಾಮಯ್ಯ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com