ನಮ್ಮ ಬಗೆ ಮೃದು ಧೋರಣೆಯಿಂದ ಸಿಎಂ ಚುನಾವಣೆಗೆ ಟಿಕೆಟ್ ನೀಡೋದಾಗಿ ಹೇಳಿದ್ರು: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್

ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ತೀರ್ಪು ಇನ್ನೂ ಬಾಕಿ ಇರುವುದರಿಂದ ಈಗಲೇ ಬಿಜೆಪಿ ಸೇರುತ್ತೇನೆ ಎಂದು ಹೇಳಲು ಬರುವುದಿಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ. 
ಪ್ರತಾಪ್ ಗೌಡ ಪಾಟೀಲ್
ಪ್ರತಾಪ್ ಗೌಡ ಪಾಟೀಲ್
Updated on

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ತೀರ್ಪು ಇನ್ನೂ ಬಾಕಿ ಇರುವುದರಿಂದ ಈಗಲೇ ಬಿಜೆಪಿ ಸೇರುತ್ತೇನೆ ಎಂದು ಹೇಳಲು ಬರುವುದಿಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹದಿನೇಳು ಜನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ರಚನೆ ಆಗಿದೆ. ಸರ್ಕಾರ ರಚನೆಗೆ ನಾವು ಸಹಕರಿಸಿದ್ದಕ್ಕಾಗಿಯೇ ನಮ್ಮ ಬಗ್ಗೆ ಬಿಜೆಪಿಗೆ ಮೃದು ಧೋರಣೆಯಿದೆ. ಆದ್ದರಿಂದ ಉಪಚುನಾವಣೆಗೆ ನಮಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ ಎಂದರು.

ಮೊದಲು ನ್ಯಾಯಾಲಯದ ತೀರ್ಪು ಬರಲಿ. ಆ ನಂತರ ಯಾವ ಪಕ್ಷಕ್ಕೆ ಸೇರಬೇಕು ಎಂಬ ಬಗ್ಗೆ ನಿರ್ಧಾರ ಮಾಡಲಾಗುವುದು. ಯಾರು ಏನೇ ಹೇಳಿದರೂ ಗೊಂದಲ ಸೃಷ್ಟಿ ಮಾಡಿದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರತಾಪ್ ಗೌಡ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com