ನಮ್ಮಂತವರು ಮುಖ್ಯಮಂತ್ರಿಯಾಗಿದ್ದರೆ ರಾಜೀನಾಮೆ:ಎಚ್.ಡಿ.ರೇವಣ್ಣ ವ್ಯಂಗ್ಯ

ಜಂಬೋ ಸರ್ಕಸ್​ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ  ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ವ್ಯಂಗ್ಯವಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾಸನ: ಜಂಬೋ ಸರ್ಕಸ್​ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ  ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ನಮ್ಮಂತಹವರು ಯಾರಾದರೂ ಇದ್ದರೆ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧಿಕಾರದಿಂದ ಕೆಳಗೆ ಇಳಿಯುತ್ತಿದ್ದೆವು ಎಂದು ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ  ಪುತ್ರ ನಮ್ಮ ಸಮುದಾಯದ ಸ್ವಾಮೀಜಿ ಬಗ್ಗೆ  ತಲೆಕೆಡಿಸಿ ಕೊಳ್ಳುವ ಅವಶ್ಯಕತೆ ಇಲ್ಲ.ನಮ್ಮ ಸಮುದಾಯದ ಭಕ್ತರಿದ್ದಾರೆ ಅವರು ವಿಚಾರಿಸಿಕೊಳ್ಳುತ್ತಾರೆ ಎಂದು ಅವರು ಬಿ.ವೈ.ವಿಜಯೇಂದ್ರ ವಿರುದ್ಧ ಎಚ್ಚರಿಕೆ ನೀಡಿದರು.

ಬಿ.ವೈ.ಜಯೇಂದ್ರ  ಇಷ್ಟು ದಿನ ವನವಾಸದಲ್ಲಿದ್ದರು. ಈಗ ಅವರ ಖಜಾನೆ ಖಾಲಿಯಾಗಿದೆ ಅದಕ್ಕೆ ಯಡಿಯೂರಪ್ಪ  ಪುತ್ರ ಖಜಾನೆ ಭರ್ತಿ ಮಾಡಿಕೊಳ್ಳಲಿ. ಹಿಂದೆ ಕೇಂದ್ರ ಸರ್ಕಾರದಿಂದ ಹಾಸನ, ಮಂಡ್ಯ,  ತುಮಕೂರು ಜಿಲ್ಲೆಯ ಜೆಡಿಎಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ.ಕುಮಾರಸ್ವಾಮಿ, ದೇವೇಗೌಡರ ಹಾಗೂ ನನ್ನ ದೂರವಾಣಿ  ಕದ್ದಾಲಿಕೆ ಮಾಡಿದ್ದಾರೆ ಎಂದು ಅವರು ಕೇಂದ್ರ  ಸರ್ಕಾರದ ವಿರುದ್ಧ ಆರೋಪ ಮಾಡಿದರು.

ನೆರೆ ಸಂತ್ರಸ್ಥರ ಪರಿಹಾರ ನೀಡಲಾಗದೆ  ವಿಚಾರ ಮುಚ್ಚಿ ಹಾಕಲು ನಿರ್ಮಲಾ ನಂದ ಸ್ವಾಮೀಜಿ ದೂರವಾಣಿ ಕದ್ದಾಲಿಕೆಯ ಆರೋಪ ಮಾಡಿ  ಅನಾವಶ್ಯಕ ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರದಿಂದ  ಸಾಧ್ಯವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com