ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರ ದೋಖಾ; ಸದಾನಂದ ಗೌಡ್ರ ವಿರುದ್ಧ ಕಿಡಿಕಾರಿದ ಸೂಲಿಬೆಲೆ

ಕರ್ನಾಟಕದ ಸಂಸದರು ತಮಿಳುನಾಡು ಸಂಸದರನ್ನು ನೋಡಿ ಕಲಿಬೇಕು ಎಂದು ಕಿಡಿಕಾರಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಇದೀಗ ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾನಂದಗೌಡ-ಚಕ್ರವರ್ತಿ ಸೂಲಿಬೆಲೆ
ಸದಾನಂದಗೌಡ-ಚಕ್ರವರ್ತಿ ಸೂಲಿಬೆಲೆ
Updated on

ಬೆಂಗಳೂರು: ಕರ್ನಾಟಕದ ಸಂಸದರು ತಮಿಳುನಾಡು ಸಂಸದರನ್ನು ನೋಡಿ ಕಲಿಬೇಕು ಎಂದು ಕಿಡಿಕಾರಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಇದೀಗ ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸದಾನಂದ ಗೌಡರು ಉತ್ತರ ಕರ್ನಾಟಕದ ಪ್ರವಾಹ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವವರ ಬಗ್ಗೆ ಕನಿಕರವಿದೆ ಎಂದು ಟ್ವೀಟ್ ಮಾಡಿದ್ದು ಈ ಟ್ವೀಟ್ ಇದೀಗ ಚರ್ಚೆಗೆ ಗ್ರಾಸವಾಗಿದೆ. 

ಸದಾನಂದ ಗೌಡರ ಟ್ವೀಟ್ ಗೆ ರೀ ಟ್ವೀಟ್ ಮಾಡಿರುವ ಸೂಲಿಬೆಲೆಯವರು, ಇವರು ಈಗ ಬಂದರು. ಸದಾನಂದಗೌಡರೇ ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com