ಬೆಂಗಳೂರು: ದೆಹಲಿಯಿಂದ ನಿನ್ನೆ ನಗರಕ್ಕೆ ಆಗಮಿಸಿದಾಗ ಬೆಂಬಲಿಗರು ನೀಡಿದ ಸ್ವಾಗತದ ವೇಳೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಆಪ್ತರ ಜೊತೆ ನಡೆಸಿದ ಸಭೆಯಲ್ಲಿ ಈ ವಿಚಾರ ವನ್ನು ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿರುವ ವಿಡಿಯೋವೊಂದು ಭಾರೀ ವಿವಾದಕ್ಕೆ ಕಾರಣ ವಾಗಿದೆ.ಡಿಕೆ ಶಿವಕುಮಾರ್ ಅವರು ಜೆಡಿಎಸ್ ಬಾವುಟ ಹಿಡಿದುಕೊಳ್ಳುವ ಅಗತ್ಯ ಏನಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿರುವುದ್ದು ವಿಡಿಯೋದಲ್ಲಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾಲ್ ಜೈಲಿನಿಂದ ಜಾಮೀನು ಪಡೆದು ಬಿಡುಗಡೆ ಯಾಗಿ ನಗರಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿವರೆಗೆ ನಿನ್ನೆ ಅದ್ಧೂರಿ ಸ್ವಾಗತ ಸಿಕ್ಕಿತ್ತು.ಈ ಸಂದರ್ಭದಲ್ಲಿ ಅವರು ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದರು.ಈ ಬಗ್ಗೆ ಸಿದ್ದರಾಮಯ್ಯ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚೆರ್ಚೆ ಹುಟ್ಟು ಹಾಕಿದೆ.
Advertisement