ಹೊಸ ಸಂಚಾರಿ ನಿಯಮದಿಂದ ಜನಸಾಮಾನ್ಯರಿಗೆ ಕಿರುಕುಳ: ಭಾರೀ ದಂಡಕ್ಕೆ ಸಿದ್ದರಾಮಯ್ಯ ವಿರೋಧ

ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ತಡೆಗೆ ವಿಧಿಸುತ್ತಿರುವ ಭಾರೀ ದಂಡ  ಅವೈಜ್ಞಾನಿಕವಾಗಿದ್ದು, ಇದರಿಂದ ಜನಸಾಮಾನ್ಯರಿಗೆ ಕಿರುಕುಳವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆಗೆ ವಿರೋಧ ವ್ಯಕ್ತಪಡಸಿದ್ದಾರೆ.

ಈ ಸಂಬಂಧ ಟ್ವೀಟ್‍ ಮಾಡಿರುವ ಅವರು, ಸಂಚಾರ ಉಲ್ಲಂಘನೆಗಾಗಿ ದಂಡಕ್ಕೆ ಇತ್ತೀಚಿನ ತಿದ್ದುಪಡಿ ಸಾಮಾನ್ಯ ಜನರಿಗೆ ಕಿರುಕುಳ ನೀಡುವ ಸಾಧನವಾಗಿದೆ. ಒಟ್ಟಾರೆ ಆದೇಶಕ್ಕಾಗಿ ಸಂಚಾರ ನಿಯಮಗಳನ್ನು ಪಾಲಿಸುವುದು ಖಂಡಿತವಾಗಿಯೂ ಅವಶ್ಯಕ. ಆದರೆ ಭಾರಿ ದಂಡಗಳು ಜನರನ್ನು ಬರಿದಾಗಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಮಾದರಿಯ ದೊಡ್ಡ ಮೊತ್ತದ ದಂಡ ಆಟೊಮೊಬೈಲ್‍ ಕ್ಷೇತ್ರಕ್ಕೆ ಮಾರಕ. ಇದು ವಾಹನ ಮಾರಾಟ ಪ್ರಕ್ರಿಯೆಯನ್ನೇ ನಿಧಾನಗೊಳಿಸಬಹುದು. ಸಣ್ಣ ವ್ಯಾಪಾರಸ್ಥರು ದೊಡ್ಡ ಸಂಖ್ಯೆಯಲ್ಲಿದ್ದು, ಇವರೇ ದೊಡ್ಡ ಆದಾಯ ಸಂಗ್ರಹ ಮೂಲವಾಗಿದ್ದು, ಮರೆತು ಕೆಲ ದಾಖಲೆ ತರದ ಸಂದರ್ಭ ಸಂಕಷ್ಟಕ್ಕೆ ಒಳಗಾಗುತ್ತಾರೆ. ಕಾಯ್ದೆಯನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸುವ ಮೊದಲು ಇಂತಹ ಅನೇಕ ಸಮಸ್ಯೆಗಳನ್ನು ಪರಿಗಣಿಸಬೇಕಾಗುತ್ತದೆ. ದಂಡವನ್ನು ಕಡಿಮೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆ ಜಾರಿಯಿಂದಾಗಿ ಭಾರೀ ಪ್ರಮಾಣದ ದಂಡ ಪಾವತಿಸಬೇಕಾಗಿ ಬಂದ ಹಲವಾರು ಪ್ರಕರಣಗಳು ದೇಶದಾದ್ಯಂತ ವರದಿಯಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಕಾಯಿದೆಯ ಪರ ಹಾಗೂ ವಿರೋಧದ ಚರ್ಚೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com