ಬಳ್ಳಾರಿ ಜಿಲ್ಲೆ ವಿಭಜಿಸಿದರೆ ರಾಜೀನಾಮೆ: ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.
ಸೋಮಶೇಖರ್ ರೆಡ್ಡಿ
ಸೋಮಶೇಖರ್ ರೆಡ್ಡಿ
Updated on

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನು ಪ್ರತಿನಿಧಿಸುವ ನಾಲ್ಕು ಬಿಜೆಪಿ ಶಾಸಕರಿದ್ದು, ಯಾರಿಗೂ ಜಿಲ್ಲೆ ವಿಭಜಿಸುವ ಸರ್ಕಾರದ ಕ್ರಮಕ್ಕೆ ಒಪ್ಪಿಗೆ ಇಲ್ಲ. ಅನರ್ಹ ಶಾಸಕ ಆನಂದ್ ಸಿಂಗ್ ಅವರ ಮನವಿಗೆ ಯಡಿಯೂರಪ್ಪ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬಾರದು ಎಂದರು.

ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಳ್ಳಾರಿ ಜಿಲ್ಲೆಯ ವಿಭಜನೆ ಬಗ್ಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಮಾತನಾಡಿರಲಿಲ್ಲ. ಅದರೀಗ ಸರ್ಕಾರ 5 ತಾಲೂಕುಗಳನ್ನು ವಿಭಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಸಂಪುಟದ ಮುಂದೆ ಜಿಲ್ಲಾ ವಿಭಜನೆಯ ಪ್ರಸ್ತಾಪ ಮಾಡಬಾರದು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com