ಪ್ರಧಾನಿ ಮೋದಿಯಿಂದ ರಾಜ್ಯದ ಜನತೆಗೆ ಅವಮಾನ: ಯುಟಿ ಖಾದರ್ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡದೇ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ. 
ಯುಟಿ ಖಾದರ್
ಯುಟಿ ಖಾದರ್

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡದೇ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ.

ಪಾವಗಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಸರ್ಕಾರ ತನ್ನದೇ ಆದಂತಹ ರಾಜಕೀಯ ಜಂಜಾಟದಲ್ಲಿ ಇದ್ದು, ರಾಜ್ಯದ ಜನತೆಯನ್ನು ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ಯಾವುದೇ ರೀತಿಯ ಸ್ಪಷ್ಟವಾದ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ, ಜನಸಾಮಾನ್ಯರ ಮೇಲೆ ಮಾನವೀಯತೆ ಮತ್ತು ಕರುಣೆ ಇಲ್ಲವಾಗಿದೆ. ರಾಜಕೀಯ ಜಂಜಾಟ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಪೂರಕವಾದಂತಹ ಯಾವುದೇ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ರಾಜ್ಯದ ಅಭಿವೃದ್ಧಿಗಾಗಿ ನಾವು ಕಾಂಗ್ರೆಸ್ಸಿನರು ಮುಖ್ಯಮಂತ್ರಿಗಳಜೊತೆ ಇರುತ್ತೇವೆ. ಆದರೆ, ಈ ಸರ್ಕಾರ ಜನತೆಯ ಅಭಿವೃದ್ಧಿಗಾಗಿ ಒಂದು ಕೆಲಸವನ್ನು ಮಾಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com