ಇದಕ್ಕೂ ಮುನ್ನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವರು ಪ್ರತ್ಯೇಕ ಸಭೆ ನಡೆಸಿದ್ದು , ರಮೇಶ್ ಜಾರಕಿಹೊಳಿ ನಡೆಯಿಂದ ಸಮ್ಮಿಶ್ರ ಸರ್ಕಾರ ರಕ್ಷಿಸಿಕೊಳ್ಳುವ ಬಗ್ಗೆ , ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಗಹನ ಚರ್ಚೆ ನಡೆಯಿತು ಎನ್ನಲಾಗಿದೆ. ಅಲ್ಲದೆ ಬೆಳಗಾವಿ ರಾಜಕಾರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ನಡೆಸದಂತೆಯೂ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.