ಇಂದು ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನೀಡುವ ಜವಾಬ್ದಾರಿಯನ್ನು ಮಾಡುತ್ತೇನೆ. ಹಿಂದೆ ಬಳ್ಳಾರಿಯಲ್ಲೂ ದೊಡ್ಡ ದೊಡ್ಡ ನಾಯಕರು ಇದ್ದರೂ ಪಕ್ಷ ತಮಗೆ ಜವಾಬ್ದಾರಿ ನೀಡಿತು. ಬಳಿಕ ಮೈಸೂರು, ಗುಂಡ್ಲುಪೇಟೆ ಸೇರಿ ಹಲವು ಉಪ ಚುನಾವಣೆಗಳಲ್ಲಿ ಪಕ್ಷ ಚುನಾವಣಾ ಉಸ್ತುವಾರಿ ನೀಡಿತ್ತು. ಎಲ್ಲಾ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದರು.