ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಪ್ರತಿ ಪಕ್ಷ ನಾಯಕ ಸ್ಥಾನದ ಬಗ್ಗೆ ಕೇಳಿದಾಗ, ಪ್ರಸ್ತುವ ಯಾವ ಸ್ಥಾನವೂ ಖಾಲಿ ಇಲ್ಲ. ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಸದ್ಯಕ್ಕೆ ನಾನು ಮಾಜಿ ಸಚಿವ ಮತ್ತು ಹಾಲಿ ಶಾಸಕ ಅಷ್ಟೇ. ಈಗ ಕ್ಷೇತ್ರದ ಕಡೆ ಗಮನಹರಿಸುವ ಅವಕಾಶ ಸಿಕ್ಕಿದೆ ಎಂದು ಸೂಚ್ಯವಾಗಿ ಹೇಳಿದರು.