ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವನ್ನು ಮುಂದಿಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೆಳೆದಿದ್ದಾರೆ. ತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ?, ಸಂಪುಟ ವಿಸ್ತರಣೆಯದ್ದೇ? ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.