ನಾನು ಸ್ವತಂತ್ರವಾಗಿದ್ದೇನೆ, ಸ್ವತಂತ್ರವಾಗಿಯೇ ಕ್ಷೇತ್ರದ ಕೆಲಸ ಮಾಡುತ್ತೇನೆ. ಮಾಯಾವತಿಯವರ ಆದೇಶದ ಮೇರೆಗೆ ತಟಸ್ಥವಾಗಿದ್ದೆ ಎಂದು ಸ್ಪಷ್ಟನೆ ನೀಡಿದರು. ಎನ್.ಮಹೇಶ್ ಹಣ ತೆಗೆದುಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ನನ್ನ ಮೇಲೆ ಕೇಳಿ ಬರುತ್ತಿರುವ ಆರೋಪಗಳೆಲ್ಲಾ ಸುಳ್ಳು. ನಾನು ಯಾವ ಪಕ್ಷಕ್ಕೂ ಸಹಾಯ ಮಾಡಿಲ್ಲ. ನನಗೆ ಯಾವ ಪಕ್ಷದ ಸಹಾಯವೂ ಬೇಡ ಎಂದರು. ಬಿಜೆಪಿ ಸರ್ಕಾರ ಇದೆ, ಅವರಿಂದ ನನ್ನ ಕ್ಷೇತ್ರದ ಕೆಲಸ ಮಾಡಿಸಿಕೊಳ್ಳುತ್ತೇನೆ. ಹಿಂದಿನ ಸರ್ಕಾರ ನನ್ನ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ನಾನು ಕೇಳಿದಷ್ಟು ಅನುದಾನವನ್ನು ನೀಡಲಿಲ್ಲ ಎಂದು ಮಹೇಶ್ ಮೈತ್ರಿ ಸರ್ಕಾರದ ಬಗ್ಗೆ ಬೇಸರ ವ್ಯಕ್ತಪಡಿಸಿದರು.