ಸಾಕು ಸಾಕಾಯ್ತು: ಚುನಾವಣಾ ರಾಜಕಾರಣಕ್ಕೆ ಮಾಜಿ ಸಚಿವ ಜಿ ಟಿ ದೇವೇಗೌಡ ಗುಡ್ ಬೈ

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮಾಜಿ ಸಚಿವ ಜಿ ಟಿ ದೇವೇಗೌಡ ಹೇಳಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಜಿಟಿ ದೇವೇಗೌಡ
ಜಿಟಿ ದೇವೇಗೌಡ
ಬೆಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮಾಜಿ ಸಚಿವ ಜಿ ಟಿ ದೇವೇಗೌಡ ಹೇಳಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. 
'ಐವತ್ತು ವರ್ಷದಿಂದ ರಾಜಕಾರಣ ನೋಡಿದ್ದೇನೆ. ನನ್ನ ನೋವು ಏನು ಎಂದು ದೇವರಿಗೆ ಮಾತ್ರ ಗೊತ್ತು. ಬಿಜೆಪಿಯಲ್ಲಿ ನನಗೆ ಹಲವಾರು ಸ್ನೇಹಿತರಿದ್ದಾರೆ. ನಾನು ಚುನಾವಣೆಯಲ್ಲಿ ಸೋತಾಗಲೂ ಯಡಿಯೂರಪ್ಪ ಗೃಹ ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದರು. ನಾನು ಈಗ ಬಿಜೆಪಿಗೆ ಹೋಗುವ ತೀರ್ಮಾನ ಮಾಡಿಲ್ಲ. ಕೆಲವು ಕಾರ್ಯಕರ್ತರು ಆ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ.' ಎಂದು ಹೇಳಿದ್ದಾರೆ. 
'ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಈ ಕುರಿತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜಕೀಯದಲ್ಲಿ ನಾನು ಅನುಭವಿಸಿರುವ ನೋವು ನನಗೆ ಮಾತ್ರ ಗೊತ್ತು. ನಾನು ಯಾರ ಹಂಗಿನಲ್ಲೂ ಬದುಕುತ್ತಿಲ್ಲ. ನನಗೆ ಯಾವುದೇ ರಾಜಕೀಯ ಗುರುಗಳೂ ಇಲ್ಲ.' ಎಂದು ಜಿ ಟಿ ದೇವೇಗೌಡ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com