ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಏಕ ಪಕ್ಷೀಯವಾಗಿ ಕೆಲವರ ಮಾತು ಕೇಳಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಇದರಿಂದ ನಾವು ವಿಚಲಿತರಾಗಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಕ್ಕಾಗಿ ಮೊರೆ ಹೋಗಿದ್ದೇವೆ. ನ್ಯಾಯಾಲಯದಲ್ಲಿ ನಮಗೆ ಖಂಡಿತ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಏನು ಬೇಕಾದರೂ ಮಾಡಲಿ, ಕಾಂಗ್ರೆಸ್ ನವರು ಮಾಡಿರುವ ಅನರ್ಹತೆಯನ್ನು ಮತದಾರರು ಅರ್ಹತೆಯಾಗಿ ಬದಲಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದರು.